K.R Circle Bus accident: ಕೆ. ಆರ್ ಸರ್ಕಲ್ ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!

ಬೆಂಗಳೂರು : ನಗರದ ಕೆ.ಆರ್. ಸರ್ಕಲ್‌ನಲ್ಲಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಎಸಿ ಬಸ್‌ಗೆ ಹಿಂಬದಿಯಿಂದ ಮತ್ತೊಂದು ಬಸ್ ಡಿಕ್ಕಿ ಹೊಡೆದಿದ್ದು, ಮುಂಭಾಗ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ತೀವ್ರ ಗಾಯಗೊಂಡ ಚಾಲಕ ಹಾಗೂ ಯುವತಿಯನ್ನು ರಕ್ಷಿಸಿ ಸೇಂಟ್ ಮಾರ್ಥಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ಎಡಗಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದುಬಾರಿ ವೆಚ್ಚ ಕೇಳುತ್ತಿರುವುದರಿಂದ ಗಾಯಾಳುಗಳ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಪಘಾತದಿಂದಾಗಿ ಸ್ಥಳದಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದ್ದು, ಕ್ರೇನ್ ಬಳಸಿ ಬಸ್‌ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles