ನಡುರೋಡಲ್ಲಿ ಕೊಚ್ಚಿ ಕೊಂದ ಚೇತನ್​ ಕೊನೆಗೂ ಅಂದರ್​..!

ಮಂಗಳೂರು: ಬಂಟ್ವಾಳದ ಬಿಸಿರೋಡ್‌ನಲ್ಲಿ ನಿನ್ನೆ ( ಗುರುವಾರ ) ನಡೆದ ಭೀಕರ ಹತ್ಯೆ ಪ್ರಕರಣ ಕರಾವಳಿ ಭಾಗವನ್ನು ಬೆಚ್ಚಿಬೀಳಿಸಿದೆ. ಲಾವಣ್ಯ ಎಂಬ ಯುವತಿಯನ್ನು ಚೇತನ್ ಎಂಬ ಯುವಕ ನಡುರೋಡಲ್ಲಿ ಕೊಚ್ಚಿ ಕೊಂದಿದ್ದು, ಆ ವಿಡಿಯೋ ಕೂಡ ಎಲ್ಲೆಡೆ ವೈರಲ್​ ಆಗಿ ಆತಂಕ ಹುಟ್ಟುಹಾಕಿತ್ತು. ಇದೀಗ ಈ ಪ್ರಕರಣದ ಆರೋಪಿ ಚೇತನ್​ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹತ್ಯೆ ಮಾಡಿ ಓಡಿ ಹೋಗಿದ್ದ ಚೇತನ್​ ಅರೆಸ್ಟ್​ ಆಗಿದ್ದಾರೆ.

ಬಂಟ್ವಾಳ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನಡುರೋಡಲ್ಲಿ ಲಾವಣ್ಯಳನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪದ ಮೇಲೆ ಪೊಲೀಸರು ಚೇತನ್ ಅನ್ನು ಬಂಧಿಸಿದ್ದಾರೆ. ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇವರ ಸಂಬಂಧದ ಬಗ್ಗೆ ಕುಟುಂಬಸ್ಥರು ಕೂಡ ಕೆಲವು ಮಾಹಿತಿಗಳನ್ನು ಪೊಲೀಸರಿಗೆ ನೀಡಿದ್ದಾರೆ.

Related Articles